ದತ್ತಪೀಠದ ಹನುಮಂತನ ಮೂರ್ತಿಗೆ ನವೀನ ತಂತ್ರಜ್ಞಾನ ಅಳವಡಿಸಿ ಧರ್ಮಪ್ರಚಾರ ಮಾಡುತ್ತಿರುವುದು ಶ್ಲಾಘನೀಯ ಸಂಗತಿ. ಯುವಕರಿಗೆ ಇದು ಮಾದರಿಯಾಗಬೇಕು. ವಿಜ್ಞಾನವನ್ನು ಧರ್ಮಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಭಾಗವಹಿಸಿದ್ದರು.