ಶಾಸಕ ರವಿ ಸುದ್ದಿಗಾರರೊಂದಿಗೆ ಮಾತನಾಡಿ, ‘ದತ್ತ ಜಯಂತಿ ಪೂರ್ವದಿನ ಭಿಕ್ಷಾಟನೆ ಮಾಡಿ, ಇರುಮುಡಿ ಕಟ್ಟಿ ದತ್ತಪೀಠಕ್ಕೆ ತೆರಳಿದರೆ ಒಳಿತಾಗುತ್ತದೆ ಎಂಬ ನಂಬಿಕೆ ಇದೆ. ಅದರಂತೆ, ದತ್ತಮಾಲೆ ಧಾರಣೆ ಆರಂಭಿಸಿದ ವರ್ಷದಿಂದಲೂ ಈ ಪದ್ಧತಿ ಅನುಸರಿಸುತ್ತಿದ್ದೇವೆ. ಐದು ಮನೆಗಳಲ್ಲಿ ಭಿಕ್ಷಾಟನೆ ಮಾಡಿದ್ದೇವೆ. ಭಾನುವಾರ ಹೊನ್ನಮ್ಮನ ಹಳ್ಳದಲ್ಲಿ ಸ್ನಾನ ಮಾಡಿ, ಪಾದಯಾತ್ರೆ ಮೂಲಕ ದತ್ತಪೀಠಕ್ಕೆ ತೆರಳುತ್ತೇವೆ’ ಎಂದು ಹೇಳಿದರು.