‘ನಾಗಪುರದಲ್ಲಿ ಬ್ಯಾಟಿಂಗ್ ಸ್ನೇಹಿ ಪಿಚ್ ಲಭಿಸಿದರೆ ಉತ್ತಮವಾಗಿ ಆಡುವ ಸಾಮರ್ಥ್ಯ ನಮ್ಮಲ್ಲಿದೆ. ಆರಂಭಿಕ ಜೋಡಿ ಆರ್. ಸಮರ್ಥ್ ಮತ್ತು ಮಯಂಕ್ ಅಗರವಾಲ್ ಅವರು ಉತ್ತಮ ಫಾರ್ಮ್ ನಲ್ಲಿದ್ದಾರೆ. ಕರುಣ್ ನಾಯರ್, ಡಿ. ನಿಶ್ಚಲ್ ಮತ್ತು ಸ್ಟುವರ್ಟ್ ಬಿನ್ನಿ ಕೂಡ ಚೆನ್ನಾಗಿ ಆಡುತ್ತಿದ್ದಾರೆ. ಕೆ.ಎಲ್. ರಾಹುಲ್ ಅವರು ತಂಡಕ್ಕೆ ಮರಳುವ ಬಗ್ಗೆ ಖಚಿತವಿಲ್ಲ. ಅವರು ಬಂದರೆ ತಂಡದ ಬಲ ಹೆಚ್ಚಲಿದೆ’ ಎಂದು ವಿನಯ್ ಹೇಳಿದರು.