ವಡ್ಲೂರು, ಚಿಕ್ಕಸೂಗೂರು ಸುತ್ತಮುತ್ತ ಪ್ರದೇಶಗಳಲ್ಲಿನ ಕೈಗಾರಿಕೆಗಳ ರಾಸಾಯನಿಕ ಮಿಶ್ರಿತ ನೀರು ಗಂಜಳ್ಳಿ ಹಳ್ಳಕ್ಕೆ ಸೇರುತ್ತಿದೆ. ಈ ಹಳ್ಳದಲ್ಲಿ ಮೀನು ಸಾಕಾಣಿಕೆ ಮಾಡಲಾಗುತ್ತಿದ್ದು, ಅವುಗಳ ಸಾವಿನಿಂದ ಮೀನುಗಾರರಿಗೆ ನಷ್ಟ ಉಂಟಾಗಿದೆ. ಕೈಗಾರಿಕೆಗಳ ರಾಸಾಯನಿಕ ಮಿಶ್ರಿತ ನೀರು ಹಳ್ಳ ಸೇರದಂತೆ ಪ್ರತ್ಯೇಕ ಕಾಲುವೆ ನಿರ್ಮಾಣ ಮಾಡಲಾಗಿದೆ. ಆದರೆ, ಅದು ಅವೈಜ್ಞಾನಿಕವಾಗಿರುವುದರಿಂದ ರಾಸಾಯನಿಕ ಮಿಶ್ರಿತ ನೀರು ನೇರವಾಗಿ ಹಳ್ಳಕ್ಕೆ ಸೇರುತ್ತಿದೆ’ ಎಂದು ಸ್ಥಳೀಯರು ದೂರಿದರು.