ನಿಡಿಗೋಳ ಗ್ರಾಮದ ಬಸಣ್ಣ ಸಾಹುಕಾರ ಅವರ ಪುತ್ರಿಯ ವಿವಾಹ ಸಿದ್ಧಾಪುರ ಗ್ರಾಮದಲ್ಲಿ ನಡೆಯಿತು. ಈ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ಹಾಗೂ ಅವರ ಸಂಬಂಧಿಕರು ಭೋಜನ ಮುಗಿಸಿಕೊಂಡು ಸಿಂಧನೂರಿಗೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಕಾರಟಗಿಯಲ್ಲಿ ಕೆಲವರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ. ಇನ್ನೂ ಕೆಲವರಿಗೆ ಸ್ಥಳದಲ್ಲಿಯೇ ವಾಂತಿ, ಬೇಧಿಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರು ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು ಎಂದು ತಿಮ್ಮನಗೌಡ ನಿಡಿಗೋಳ ತಿಳಿಸಿದರು.