ಸ್ಪರ್ಧೆಯು ಮೂರು ಹಂತಗಳಲ್ಲಿ ನಡೆಯಲಿದ್ದು, ಉಪಾಂತ್ಯದಲ್ಲಿ 12 ಸ್ಪರ್ಧಿಗಳನ್ನು ಆಯ್ದು ಅಂತಿಮ ಸ್ಪರ್ಧೆ ನಡೆಲಾಗುವುದು. ಅದರಲ್ಲಿ 8 ಗಾಯಕರನ್ನು ಆಯ್ದು ಡಿ. 24ರಂದು ನಡೆಯುವ ಕುಸುಮಾಂಜಲಿ- 2017ರ ಕಾರ್ಯಕ್ರಮದಲ್ಲಿ ಅವರಿಗೆ ವೃತ್ತಿಪರ ಗಾಯಕರೊಂದಿಗೆ ಹಾಡುವ ಅವಕಾಶ ನೀಡಲಾಗುವುದು. ಈ ಎಂಟು ಮಂದಿಯಲ್ಲಿ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ವಿಜೇತರಾಗುವ ಇಬ್ಬರಿಗೆ ’ಗಾನಕುಸುಮ 2017’ ಪ್ರಶಸ್ತಿ ನೀಡಲಾಗುವುದು ಎಂದರು. ಮುಂಬೈ ಉದ್ಯಮಿ ಲಕ್ಷ್ಮಣ ಪೂಜಾರಿ, ಗಾಯಕಿ ಪಲ್ಲವಿ ತುಂಗ ಇದ್ದರು. ರೇಷ್ಮಾ ನಿರೂಪಿಸಿದರು.