ಕಾರವಾರ: ‘ಯಲ್ಲಾಪುರ ಪಟ್ಟಣ ಪಂಚಾಯ್ತಿಯಿಂದ ಬೇರ್ಪಡಿಸಿರುವ ಸಹಸ್ರಳ್ಳಿ, ಕೊಂಡೆಮನೆ ವಾರ್ಡ್ಗಳನ್ನು ಯಾವುದೇ ಗ್ರಾಮ ಪಂಚಾಯ್ತಿಗೆ ಸೇರಿಸದ ಕಾರಣ ಇಲ್ಲಿನ ಜನರು ಪರದಾಡುವಂತಾಗಿದೆ. ಈ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಪ್ರವಾಸದ ವೇಳೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಯಲ್ಲಾಪುರ ತಾಲ್ಲೂಕು ಸಮಿತಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ.