ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ ನಿಷೇಧ: ಪತ್ರ ಚಳವಳಿ

Last Updated 5 ಡಿಸೆಂಬರ್ 2017, 8:48 IST
ಅಕ್ಷರ ಗಾತ್ರ

ಮುಂಡರಗಿ: ‘ಗೋಹತ್ಯೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್.ಗೌಡರ ಹೇಳಿದರು. ಪಟ್ಟಣದ ಬೃಂದಾವನ ವೃತ್ತದಲ್ಲಿ ಸೋಮವಾರ ಗೋಹತ್ಯೆ ನಿಷೇಧ ಪತ್ರ ಚಳವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇಶದಲ್ಲಿ ದೇಶಿ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ದೇಸಿ ತಳಿಗಳನ್ನು ಸಂರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಕಾಯಿದೆ ರೂಪಿಸಬೇಕು. ಗೋ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಯುವ ಮುಖಂಡ ಮಂಜುನಾಥ ಇಟಗಿ, ನಾರಾಯಣಪ್ಪ ಇಲ್ಲೂರ, ಅಂದಪ್ಪ ಬೆಲ್ಲದ, ನಾಗಪ್ಪ ಸೇಡದ, ಕೆ.ವಿ.ಹಂಚಿನಾಳ, ಕೆ.ಎ. ಹಿರೇಮಠ, ಬಿ.ವಿ.ಮುದ್ದಿ, ಆರ್.ಬಿ.ತಿಮ್ಮಾಪೂರ, ಬಸವರಾಜ ರಾಮೇನಹಳ್ಳಿ, ಆನಂದಗೌಡ ಪಾಟೀಲ, ಸಂತೋಷ ಸುಣಗಾರ, ಪಿ.ಜಿ.ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT