ತಾಲ್ಲೂಕಿನ ವಿವಿಧ ಶಾಲೆಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 176 ವಿದ್ಯಾರ್ಥಿಗಳು ಕರ್ನಾಟಕ ದರ್ಶನಕ್ಕೆ ಪ್ರವಾಸ ತೆರಳಿದರು. ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಯ ವೆಚ್ಚವಾಗಿ ₹ 3,200 ನೀಡುತ್ತದೆ. ಅದರಂತೆ ತಾಲ್ಲೂಕಿಗೆ ಈ ಬಾರಿ ₹ 7.65 ಲಕ್ಷ ಬಿಡುಗಡೆಯಾಗಿದೆ. ನಿಯಮದ ಪ್ರಕಾರ ಮಕ್ಕಳಿಗೆ ಪ್ರವಾಸಿ ಸ್ಥಳಗಳಲ್ಲಿ ಸಿಗುವ ಉತ್ತಮ ಊಟ– ತಿಂಡಿ ಕಲ್ಪಿಸಬೇಕು. ಆದರೆ, ಈ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.