ಆಹಾರ ಸಾಮಗ್ರಿಗಳ ದರಪಟ್ಟಿಯನ್ನು ಎಲ್ಲರಿಗೂ ಕಾಣುವಂತೆ ಹಾಕಬೇಕು. ಆಹಾರ ಸಾಮಗ್ರಗಿಗಳು ಇಲಿ, ಹೆಗ್ಗಣ, ಕ್ರಿಮಿ ಕೀಟಗಳಿಗೆ ಸಿಗದಂತೆ ಎಚ್ಚರ ವಹಿಸಬೇಕು. ವಾರಕ್ಕೊಮ್ಮೆ ನೀರಿನ ತೊಟ್ಟಿಗಳನ್ನು ತೊಳೆಯಬೇಕು. ಸ್ವಚ್ಛತೆಯ ಕಡೆಗೆ ಎಲ್ಲರೂ ಸೇರಿ ದಿಟ್ಟ ಹೆಜ್ಜೆ ಇಡೋಣ’ ಎಂದು ಚಂದ್ರಶೇಖರ್ ಮನವಿ ಮಾಡಿದರು. ಉಪಾಧ್ಯಕ್ಷೆ ಇಮ್ರಾನ್ ಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಪೌರಾಯುಕ್ತ ರಮೇಶ್ ಸುಣಗಾರ್ ಸಭೆಯಲ್ಲಿ ಹಾಜರಿದ್ದರು.