ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಲೂರು ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ

Last Updated 6 ಡಿಸೆಂಬರ್ 2017, 8:46 IST
ಅಕ್ಷರ ಗಾತ್ರ

ಮುಳಬಾಗಿಲು: ಸಂಗ್ರಹವಾಗಿರುವ ಕೊಳಚೆ ನೀರು. ಕೊಳೆತು ನಾರುತ್ತಿರುವ ಕಸ ಕಡ್ಡಿಯಿಂದ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ– ಇದು ತಾಲ್ಲೂಕಿನ ತಾಯಲೂರು ಗ್ರಾಮಸ್ಥರ ಬವಣೆ.

ಇಲ್ಲಿನ ಗ್ರಾಮದಲ್ಲಿ 500ಕ್ಕೂ ಹೆಚ್ಚಿನ ಮನೆಗಳಿದ್ದು, ಸುಮಾರು 4,000 ಜನರು ವಾಸ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಒಳ ಚರಂಡಿ ಹಾಗೂ ರಸ್ತೆ ಬದಿಯ ಎಲ್ಲೆಡೆ ಕಸದ ರಾಶಿ. ಕಸ ವಿಲೇವಾರಿ ಮಾಡದೆ, ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ. ಇದರಿಂದಾಗಿ ರೋಗಗಳು ಹರಡುವ ಭೀತಿ ನಿಮಾರ್ಣವಾಗಿದೆ ಎಂದು ಇಲ್ಲಿನ ಗ್ರಾಮಸ್ಥರು
ದೂರುತ್ತಾರೆ.

‘ಗ್ರಾಮದ ರಸ್ತೆಯ ಬದಿ ಎಲ್ಲೆಂದರಲ್ಲಿ ತ್ಯಾಜ್ಯ ಬಿದ್ದಿದೆ. ಜತೆಗೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ನೀರು ಸಂಗ್ರಹಗೊಂಡು ದುರ್ವಾಸನೆ ಬೀರುತ್ತಿದೆ. ಇದರಿಂದ ಸೊಳ್ಳೆ ಉತ್ಪತಿಯಾಗಿ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದೆ. ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಗ್ರಾಮಸ್ಥ ಅಸ್ಲಾಂ ಮಹಮದ್ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ದೀಪಗಳಿಲ್ಲದ ಕಾರಣ ರಾತ್ರಿ ವೇಳೆಯ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಮಕ್ಕಳು ಮತ್ತು ವೃದ್ಧರು ರಾತ್ರಿ ಸಮಯದಲ್ಲಿ ಮನೆ ಬಿಟ್ಟು ಹೊರಗೆ ಬರುವ ಹಾಗೆ ಇಲ್ಲ. ಗ್ರಾಮದಲ್ಲಿನ ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪ ಅಳವಡಿಸುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ದೂರಿದರು.

‘ಇತ್ತೀಚಿನ ದಿನಗಳಲ್ಲಿ ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆ ಮಾಡುತ್ತಿದೆ. ಅದರಲ್ಲೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರೂ ಗ್ರಾಮದಲ್ಲಿ ಸ್ವಚ್ಛ ಭಾರತ್ ಕಾರ್ಯ ನಡೆಯದಿರುವುದು ಅವಮಾನಕರ ಸಂಗತಿಯಾಗಿದೆ’ ಎಂದು ಗ್ರಾಮಸ್ಥ ತನ್ವಿರ್ ಹೇಳುತ್ತಾರೆ.

ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಗ್ರಾಮದ ರಸ್ತೆ ಹಾಗೂ ಬಸ್ ನಿಲ್ದಾಣದಲ್ಲಿನ ಕಸದ ತ್ಯಾಜ್ಯವನ್ನು ಕೂಡಲೇ ವಿಲೇವಾರಿ ಮಾಡಬೇಕು. ಜತೆಗೆ ಮೂಲ ಸೌಕರ್ಯ ಒದಗಿಸಿ ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

* * 

ಗ್ರಾಮದ ಎಲ್ಲೆಂದರೆಲ್ಲಿ ಕಸದ ರಾಶಿ ಬಿದ್ದಿದೆ. ಕೊಳೆತ ನೀರು ಚರಂಡಿಗಳಲ್ಲಿ ನಿಂತಿದೆ. ಇಷ್ಟಾದರೂ ಗ್ರಾಮ ಪಂಚಾಯಿತಿ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿಲ್ಲ ತನ್ವಿರ್, ಗ್ರಾಮಸ್ಥ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT