‘ದೇಶದಲ್ಲಿ ಎರಡು ಸಮುದಾಯದ ನಡುವೆ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಈ ಎರಡೂ ಕಡೆಯವರ ಒಪ್ಪಿಗೆ ಪಡೆದು ಸೌಹಾರ್ದಯುತವಾಗಿ ರಾಮ ಮಂದಿರ ಕಟ್ಟಬಹುದು. ಈ ಕಾರಣಕ್ಕೆ ವಿವಾದವನ್ನು ನ್ಯಾಯಾಲಯದ ಹೊರಗೆ ಬಗೆಹರಿಸುವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಪ್ರಯತ್ನ ಒಳ್ಳೆಯದು. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಮುಸ್ಲಿಮರಲ್ಲಿ ಯಾವುದೇ ಆಕ್ಷೇಪ ಇಲ್ಲ, ಬದಲಿಗೆ ಸಹಮತವೇ ಇದೆ. ಆದರೆ, ಅದು ಸಂಘರ್ಷದ ಮೂಲಕ ಅಲ್ಲ, ಸೌಹಾರ್ದದಿಂದ ನಡೆಯಬೇಕು ಎಂದು ಅವರು ಆಶಿಸಿದ್ದಾರೆ’ ಎಂದು ಹೇಳಿದರು.