ವಿಡಿಯೊ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ವಿಷಯ ತಿಳಿದು ಮಠದ ಆವರಣಕ್ಕೆ ಬಂದ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮೀಜಿ ಇನ್ನು ಮಠಕ್ಕೆ ಕಾಲಿಡಬಾರದು ಎಂದು ಕೂಗಿದರು. ದಾಂದಲೆಗೂ ಮುಂದಾದರು. ಕೆಲವರು ಇದು ಸ್ವಾಮೀಜಿ ವಿರುದ್ಧ ನಡೆಸಿದ ಪಿತೂರಿ ಎಂದು ಸಮರ್ಥಿಸಿಕೊಳ್ಳಲು ಮುಂದಾದರು. ಸ್ಥಳಕ್ಕೆ ಬಂದ ಲಿಂಗಾಯತ ಹಾಗೂ ಜಂಗಮ ಸಮಾಜದ ಕೆಲ ಮುಖಂಡರು ಯುವಕರನ್ನು ಸಮಾಧಾನ ಮಾಡಿ ಪರಿಸ್ಥಿತಿ ನಿಭಾಯಿಸಿದರು.