ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸ್ವಚ್ಛ ಭಾರತ ಮಿಷನ್, ವಸತಿ ಯೋಜನೆಗಳ ಪ್ರಗತಿ ದಾಖಲೀಕರಣ, ಪಡಿತರ ಚೀಟಿ ಕಾರ್ಯ, ಬಾಪೂಜಿ ಸೇವಾ ಕೇಂದ್ರದ ಮೂಲಕ ಒಂದೇ ಸೂರಿನಡಿ ನೀಡುವ ಹಲವು ಸೇವೆ- ಈ ಎಲ್ಲದರ ಡಾಟಾ ಎಂಟ್ರಿ, ಆಧಾರ್ ಮಾಹಿತಿ ಪರಿಷ್ಕರಣೆ... ಹೀಗೆ ಗ್ರಾಮ ಪಂಚಾಯಿತಿಗಳಲ್ಲಿ ಈಗ ಕೆಲಸಗಳು ಹೆಚ್ಚಾಗಿವೆ. ಹೀಗಾಗಿ, ಅಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಸರ್ಕಾರ ಸೃಷ್ಟಿ ಮಾಡಿದ್ದು ಸ್ವಾಗತಾರ್ಹ. ಆದರೆ, ಗ್ರಾಮ ಪಂಚಾಯಿತಿಗಳಲ್ಲಿ ದಶಕದಿಂದ ದುಡಿಯುತ್ತಿರುವ ಕಂಪ್ಯೂಟರ್ ಆಪರೇಟರ್ಗಳನ್ನು ಕೈಬಿಟ್ಟು ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಅನ್ಯಾಯ.