ಕುಪ್ಪಳಿಯ ಕುವೆಂಪು ಪ್ರತಿಷ್ಠಾನ, ಬೆಂಗಳೂರಿನ ಅವಿರತ ಟ್ರಸ್ಟ್ ಸಹಯೋಗದಲ್ಲಿ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ.ಮೊದಲು ಹೆಸರು ನೋಂದಾಯಿಸುವ 80 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಎರಡೂ ದಿನ ಊಟ ಮತ್ತು ವಸತಿ ಉಚಿತ. ಶಿಬಿರಾರ್ಥಿಗಳಿಗೆ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು.