‘17 ವರ್ಷದ ಈ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ. ಯಲ್ಲಾಪುರದ ಹರೀಶ್ ಹಾಗೂ ಅಂತರಸನಹಳ್ಳಿಯ ಚಿದಾನಂದ್ ಎಂಬುವರನ್ನು ಬಂಧಿಸಲಾಗಿದೆ. ಮಧು, ಕೇಶವ್ ಮತ್ತು ಚಂದು ಎಂಬುವವರು ತಲೆಮರೆಸಿ
ಕೊಂಡಿದ್ದಾರೆ. ಅವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆರೋಪಿಗಳು ಯಲ್ಲಾಪುರ, ಅಂತರಸನಹಳ್ಳಿ, ತಿಮ್ಲಾಪುರ ಗ್ರಾಮದವರಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.