‘ಹಿರಿಯ ವಕೀಲ ಸಿ.ಎಸ್.ದ್ವಾರಕನಾಥ್ ಅವರು ರಾಮನ ಅಸ್ತಿತ್ವದ ಪ್ರಶ್ನೆ ಎತ್ತಿದ್ದಾರೆ. ಆದರೆ, ಅವರ ವಿರುದ್ಧ ಎರಡು–ಮೂರು ಕಡೆ ಪ್ರಕರಣ ದಾಖಲಿಸಲಾಗಿದೆ. ದೇವರನ್ನು ಪ್ರಶ್ನಿಸಿದರೆ, ಅಂಥವರನ್ನು ದೋಶದ್ರೋಹಿಗಳು ಎಂದು ಬಿಂಬಿಸುವ ಸನ್ನಿವೇಶ ದೇಶದಲ್ಲಿ ಸೃಷ್ಟಿಯಾಗಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ‘ಸಾಮಾಜಿಕ ಸೌಹಾರ್ದತೆಯೆಡೆಗೆ ಸಾಹಿತ್ಯ’ ರಾಷ್ಟ್ರೀಯ ಸಮ್ಮೇಳನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.