ಸತ್ತವರ ಸಂಖ್ಯೆ 36ಕ್ಕೆ ಏರಿಕೆ (ತಿರುವನಂತಪುರ ವರದಿ): ಕೇರಳ ಕರಾವಳಿಯಲ್ಲಿ ಗುರುವಾರ ಬೆಳಿಗ್ಗೆ ಮೂವರ ಮೃತದೇಹ ಪತ್ತೆಯಾಗಿದೆ. ಇದರಿಂದ, ಒಖಿ ಚಂಡಮಾರುತದಿಂದ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾದಂತಾಗಿದೆ. ಕಾಣೆಯಾಗಿರುವ 96 ಮೀನುಗಾರರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ, ಕೋಯಿಕ್ಕೋಡ್ನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಕರ ಹಡಗು ಸಂಚಾರ ಆರಂಭವಾಗಿದೆ.