ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಕ್ರಿಕೆಟಿಗ ಕೃಷ್ಣಮೂರ್ತಿ ನಿಧನ

Last Updated 7 ಡಿಸೆಂಬರ್ 2017, 19:39 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಕ್ರಿಕೆಟಿಗ ಮತ್ತು ಕ್ರೀಡಾ ಆಡಳಿತಗಾರ ಎಸ್‌.ಕೃಷ್ಣಮೂರ್ತಿ (79) ಗುರುವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಮಗಳು ಇದ್ದಾರೆ.

1959–60ರಲ್ಲಿ ಹೈದರಾಬಾದ್‌ ವಿರುದ್ಧ ಆಡುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಕೃಷ್ಣಮೂರ್ತಿ, ಒಟ್ಟು 30 ಪಂದ್ಯಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ರಾಜ್ಯ ತಂಡವನ್ನು ಮುನ್ನಡೆಸಿದ್ದ ಅವರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಜೊತೆಗೆ ಕರ್ನಾಟಕ ಸೀನಿಯರ್‌ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT