ಅವರು ಹಣವನ್ನು ಚೀಲದಲ್ಲಿ ಹಾಕಿಕೊಂಡು ಕಾರಿನ ಹಿಂದಿನ ಸೀಟಿನಲ್ಲಿ ಇಟ್ಟಿದ್ದರು. ಅಲ್ಲಿಂದ ಕೆ.ಸಿ.ಜನರಲ್ ಆಸ್ಪತ್ರೆಗೆ ಬಂದ ಮಂಜುನಾಥ್, ಆವರಣದಲ್ಲಿ ಕಾರು ನಿಲ್ಲಿಸಿ ವರದಿ ಪಡೆಯಲು ವೈದ್ಯರ ಬಳಿ ಹೋಗಿದ್ದರು. ವಾಪಸ್ ಬರುವಷ್ಟರಲ್ಲಿ ವಾಹನದ ಎಡಭಾಗದ ಗಾಜುಗಳು ಒಡೆದಿದ್ದವು. ಹಣದ ಚೀಲ ಕೂಡ ನಾಪತ್ತೆಯಾಗಿತ್ತು. ಕೂಡಲೇ ಅವರು ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರು ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.