ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿನಿಂದಲೇ ಉದ್ಯಮಿಗೆ ಬೆದರಿಕೆ ಕರೆ

Last Updated 7 ಡಿಸೆಂಬರ್ 2017, 20:12 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ಕೈದಿ ಬಸವರಾಜು ಎಂಬಾತ ಮಂಡ್ಯದ ಉದ್ಯಮಿಯೊಬ್ಬರಿಗೆ ಬೆದರಿಕೆ ಕರೆ ಮಾಡಿ ₹ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾನೆ.

ಬೆದರಿಕೆ ಕರೆಯ ಜಾಡುಹಿಡಿದು ವಿಚಾರಣೆ ನಡೆಸಲು ಬಂದ ಪೊಲೀಸರಿಗೆ ಈತನ ಬಳಿ 135 ಗ್ರಾಂ ಗಾಂಜಾ, ಮೊಬೈಲ್‌ ಫೋನ್‌, ಬೆಂಕಿಪೊಟ್ಟಣದಲ್ಲಿ ಅಡಗಿಸಿಟ್ಟಿದ್ದ 4 ಸಿಮ್‌ಕಾರ್ಡ್‌ಗಳು ಪತ್ತೆಯಾಗಿವೆ. ಜತೆಗೆ, ಪಕ್ಕದ ಬ್ಯಾರಕ್‌ನಲ್ಲಿದ್ದ ಕುಮಾರ್ ಎಂಬ ಕೈದಿಯ ಬಳಿಯೂ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಜಾಬಂದಿಯಾಗಿರುವ ಬಸವರಾಜು ಮಂಡ್ಯದ ಉದ್ಯಮಿಯೊಬ್ಬರಿಗೆ ಕರೆ ಮಾಡಿ ₹ 20 ಲಕ್ಷ ನೀಡಬೇಕು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಉದ್ಯಮಿಯು ಮಂಡ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT