ದಾವಣಗೆರೆ: ಪ್ರಸಕ್ತ ಸಾಲಿನ ಜನವರಿಯಿಂದ ನೂತನ ವೇತನ ಪರಿಷ್ಕರಣೆ ಜಾರಿಯಾಗಬೇಕು ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಸ್ಎನ್ಎಲ್ ಅಧಿಕಾರಿ ಮತ್ತು ಅಧಿಕಾರೇತರ ನೌಕರರು ಬುಧವಾರ ಕಚೇರಿಗೆ ಬಾಗಿಲು ಹಾಕಿ, ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಿದರು.
ಪ್ರತ್ಯೇಕ ಟವರ್ ಕಂಪನೆ ಸ್ಥಾಪನೆಯನ್ನು ಕೂಡಲೇ ಕೈಬಿಡಬೇಕು. 2ನೇ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಬೇಡಿಕೆಗಳನ್ನೂ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಿಎಸ್ಎನ್ಎಲ್ ಅಧಿಕಾರಿ ಮತ್ತು ಅಧಿಕಾರೇತರ ನೌಕರರ ಯೂನಿಯನ್ ಕರೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಬುಧವಾರವೂ ಕಚೇರಿಗೆ ಬಾಗಿಲು ಹಾಕಲಾಗುವುದು ಎಂದು ಯೂನಿಯನ್ ಸಂಚಾಲಕ ಈರಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.