ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ತವ್ಯಕ್ಕೆ ಗೈರು

Last Updated 13 ಡಿಸೆಂಬರ್ 2017, 9:59 IST
ಅಕ್ಷರ ಗಾತ್ರ

ದಾವಣಗೆರೆ: ಪ್ರಸಕ್ತ ಸಾಲಿನ ಜನವರಿಯಿಂದ ನೂತನ ವೇತನ ಪರಿಷ್ಕರಣೆ ಜಾರಿಯಾಗಬೇಕು ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಸ್‌ಎನ್‌ಎಲ್‌ ಅಧಿಕಾರಿ ಮತ್ತು ಅಧಿಕಾರೇತರ ನೌಕರರು ಬುಧವಾರ ಕಚೇರಿಗೆ ಬಾಗಿಲು ಹಾಕಿ, ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತ್ಯೇಕ ಟವರ್‌ ಕಂಪನೆ ಸ್ಥಾಪನೆಯನ್ನು ಕೂಡಲೇ ಕೈಬಿಡಬೇಕು. 2ನೇ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಬೇಡಿಕೆಗಳನ್ನೂ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಿಎಸ್‌ಎನ್‌ಎಲ್‌ ಅಧಿಕಾರಿ ಮತ್ತು ಅಧಿಕಾರೇತರ ನೌಕರರ ಯೂನಿಯನ್‌ ಕರೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಬುಧವಾರವೂ ಕಚೇರಿಗೆ ಬಾಗಿಲು ಹಾಕಲಾಗುವುದು ಎಂದು ಯೂನಿಯನ್‌ ಸಂಚಾಲಕ ಈರಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT