ನವದೆಹಲಿ: 2001ರ ಸಂಸತ್ತು ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪರಸ್ಪರ ಮುಖಾಮುಖಿಯಾದರು.
ಗೌರವ ನಮನ ಕಾರ್ಯಕ್ರಮದಲ್ಲಿ ಮೋದಿ ಮತ್ತು ಮನಮೋಹನ್ ಸಿಂಗ್ ಪರಸ್ಪರ ವಂದಿಸಿಕೊಂಡು ಕೈಕುಲುಕಿದರು. ಇಬ್ಬರು ನಾಯಕರು ವಂದಿಸಿಕೊಂಡಿದ್ದು ಅಲ್ಲಿ ನೆರೆದಿದ್ದವರ ಗಮನ ಸೆಳೆಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗವಹಿಸಿದ್ದರು.
ಗುಜರಾತ್ ಚುನಾವಣೆ ಪ್ರಚಾರದ ವೇಳೆ ಉಭಯ ನಾಯಕರು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡಿದ್ದರು.