‘ಹೊರಗುತ್ತಿಗೆ ಎಂಬುದು ಸರ್ಕಾರಿ ಜೀತಗಾರಿಕೆಯಾಗಿದೆ. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಸಾವಿರಾರು ಕೋಟಿ ಬಿಡುಗಡೆ ಮಾಡುತ್ತದೆ. ಅದರೆ ಸರ್ಕಾರ ಈ ಯೋಜನೆಗಳ ಜಾರಿಗೆ ಬೆನ್ನೆಲಬು ಆಗಿರುವ ಹೊರಗುತ್ತಿಗೆ ಕಾರ್ಮಿಕರನ್ನು ಕಡೆಗಣಿಸಲಾಗುತ್ತಿದೆ. ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ರದ್ದುಪಡಿಸಿ ನೇರ ವೇತನ ಪಾವತಿಸುವಂತೆ ಒತ್ತಾಯಿಸಿ ಜನವರಿ ತಿಂಗಳಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು’ ಎಂದು ನಾಗಣ್ಣ ತಿಳಿಸಿದರು.