ಕೊರಟಗೆರೆ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಆರೋಪದ ಮೇಲೆ ತಾಲ್ಲೂಕಿನ ಬೊಮ್ಮಲದೇವಿಪುರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸಚ್ಚಿದಾನಂದ ಮೂರ್ತಿ, ಶಿಕ್ಷಕರಾದ ಶೇಕ್ ಮುಜಾಮಿಲ್, ಧನಸಿಂಗ್ ರಾಥೋಡ್ ಅವರನ್ನು ಬುಧವಾರ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ (ಡಿಡಿಪಿಐ) ರವಿ ಶಂಕರರೆಡ್ಡಿ ಅಮಾನತುಗೊಳಿಸಿದ್ದಾರೆ.