ಇದೇ 16ರಂದು ಎಚ್.ಡಿ ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರ ಅಂಗವಾಗಿ ಅವರ ಅಭಿಮಾನಿಗಳಾದ ರಾಜ್ಯ ಯುವ ಜನತಾದಳದ ಉಪಾಧ್ಯಕ್ಷ ಸೈಯ್ಯದ್ ಶಾಹಿದ್ ಮತ್ತು ಬೆಂಗಳೂರು ನಗರ ಯುವ ಜನತಾದಳದ ಉಪಾಧ್ಯಕ್ಷ ರಾಜೇಂದ್ರ ಸಿಂಗ್ ಕುಮಾರಣ್ಣ ಬಾಂಡ್ ಯೋಜನೆಯನ್ನು ಪ್ರಯೋಜಿಸುತ್ತಿದ್ದಾರೆ. ರಾಮನಗರ ಜಿಲ್ಲೆಯ, ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕುಗಳಲ್ಲಿ ಇದೇ ಡಿ.16ರಂದು ಜನಿಸುವ ಮಕ್ಕಳಿಗೆ ತಲಾ 5000 ರೂ.ಗಳ ವಿಶೇಷ ಬಾಂಡ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ.