ಕಸ್ತೂರಿ ಅವರ ಮಿದುಳು ನಿಷ್ಕ್ರಿಯಗೊಂಡಿರುವುದನ್ನು ವೈದ್ಯರು ಬುಧವಾರ ಖಚಿತಪಡಿಸಿದ್ದರು. ಆದ್ದರಿಂದ ಅವರ ಅಂಗಾಂಗಗಳನ್ನು ದಾನ ಮಾಡಲು ಸಹೋದರರಾದ ಶೈಲೇಶ್, ಪ್ರತಾಪ್ ಒಪ್ಪಿಗೆ ಸೂಚಿಸಿದ್ದರು. ಮಣಿಪಾಲದಿಂದ ಮಂಗಳೂರಿನವರೆಗೆ ಸಂಚಾರ ಮುಕ್ತ ಮಾರ್ಗ (ಗ್ರೀನ್ ಕಾರಿಡಾರ್) ವ್ಯವಸ್ಥೆ ಕಲ್ಪಿಸಲಾಯಿತು. ಮೂತ್ರಪಿಂಡವನ್ನು ಫಾದರ್ ಮುಲ್ಲರ್ ಆಸ್ಪತ್ರೆ, ಇನ್ನೊಂದನ್ನು ಕಸ್ತೂರಬಾ ಆಸ್ಪತ್ರೆ, ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ಹಾಗೂ ಹೃದಯ ಕವಾಟವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸಾಗಿಸಲಾಯಿತು.