ಕಚ್ಚಾ ತೈಲ ಬೆಲೆ ಏರಿಕೆ, ಚಿಲ್ಲರೆ ಹಣದುಬ್ಬರ ಮತ್ತು ಕೈಗಾರಿಕಾ ಪ್ರಗತಿಯ ಅಂಕಿ–ಅಂಶಗಳ ಪ್ರಭಾವದಿಂದ ಷೇರುಪೇಟೆಯಲ್ಲಿ ಮಾರಾಟದ ಒತ್ತಡ ಸೃಷ್ಟಿಯಾಗಿತ್ತು. ಆದರೆ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎನ್ನುವ ನಿರೀಕ್ಷೆ ಹಾಗೂ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುತಮ ಬರಲಿದೆ ಎನ್ನುವ ಮತಗಟ್ಟೆ ಸಮೀಕ್ಷೆಗಳು ಹೂಡಿಕೆ ಚಟುವಟಿಕೆಯನ್ನು ಹೆಚ್ಚಿಸಿತು ಎಂದು ತಜ್ಞರು ಹೇಳಿದ್ದಾರೆ.