‘ಸವಲತ್ತುಗಳಿಗೆ ಫಲಾನುಭವಿಗಳ ಆಯ್ಕೆ, ಪಂಚಾಯಿತಿ ಸಭೆಯ ನಡಾವಳಿಗಳು ಎರಡೂವರೆ ವರ್ಷಗಳಿಂದ ಅಪ್ಪಸಂದ್ರ ಗ್ರಾಮದ ನಾರಾಯಣಸ್ವಾಮಿ ಎಂಬುವರ ಆದೇಶದಂತೆಯೇ ನಡೆಯುತ್ತಿವೆ. ಅವರು ಸಭೆಗಳಿಗೆ ಹಾಜರಾಗುತ್ತಿದ್ದರೂ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಲಿ ಕಾರ್ಯದರ್ಶಿಯವರಾಗಲಿ ಚಕಾರವೆತ್ತುತ್ತಿಲ್ಲ. ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡು ಆ ವ್ಯಕ್ತಿಯು ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿದ್ದಾರೆ. ಸಭೆಯಲ್ಲಿ ಭಾಗವಹಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುವಲ್ಲಿಯೂ ಸಫಲರಾಗಿದ್ದಾರೆ’ ಲ’ ಎಂದು ಸದಸ್ಯರೊಬ್ಬರು ತಿಳಿಸಿದರು.