ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜ್ಮಲ್ ಕಸಬ್‍ನ 'ತಿಥಿ' ಆಚರಿಸುವವರನ್ನು ಗುಂಡಿಕ್ಕಿ ಕೊಲ್ಲಬೇಕು: ವಜುಭಾಯಿ ವಾಲಾ

Last Updated 17 ಡಿಸೆಂಬರ್ 2017, 11:25 IST
ಅಕ್ಷರ ಗಾತ್ರ

ಬೆಂಗಳೂರು: 26/11 ಮುಂಬೈ ದಾಳಿ ಪ್ರಕರಣದ ಅಪರಾಧಿ,ಪಾಕಿಸ್ತಾನದ ಉಗ್ರ ಅಜ್ಮಲ್‌ ಕಸಬ್‌ ಗಲ್ಲು ಶಿಕ್ಷೆಗೊಳಗಾದ ದಿನದಂದು ಕಸಬ್ ತಿಥಿ ಆಚರಿಸುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಗುಡುಗಿದ್ದಾರೆ.

ಅದೇ ವೇಳೆ ದೇಶದ್ರೋಹ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಆರಂಭಿಸಬೇಕು ಎಂದಿದ್ದಾರೆ ರಾಜ್ಯಪಾಲರು.

ದೇಶದ ರಕ್ಷಣೆಯೇ ನಮ್ಮ ಆದ್ಯತೆ ಎಂಬ ವಿಷಯದ ಬಗ್ಗೆ ನಡೆದ ಸಂವಾದದಲ್ಲಿ ಮಾತನಾಡಿದ ರಾಜ್ಯಪಾಲರು, ಮುಗ್ದ ಜನರ ಹತ್ಯೆಗೈದ ಕಸಬ್‍ನ್ನು ಗಲ್ಲಿಗೇರಿಸಲು ಹಲವಾರು ವರ್ಷಗಳೇ ಬೇಕಾಯಿತು. ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿರುವವನ್ನು ತಕ್ಷಣವೇ ಶಿಕ್ಷಿಸಬೇಕು. ಇಂಥಾ ವಿಶ್ವಾಸಘಾತುಕರನ್ನು ಗಲ್ಲಿಗೇರಿಸಿದ ಸುದ್ದಿಯನ್ನು ಯಾವುದೇ ಮಾಧ್ಯಮಗಳು ಪ್ರಕಟಿಸಬಾರದು.ಉಗ್ರರ ಬಗ್ಗೆ ನಾವೆಂದೂ ಅನುಕಂಪ ಇಟ್ಟುಕೊಳ್ಳಬಾರದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT