ಆದಾಗ್ಯೂ, ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದು ಅನ್ಯಕೋಮಿನ ಯುವಕರು ಎಂದು ಸುದ್ದಿ ಹಬ್ಬಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಮಾಗೋಡು ಭಾಗದಲ್ಲಿ ಕೆಲವು ಕಿಡಿಗೇಡಿಗಳು ಅನ್ಯಕೋಮಿನವರ ಬಗ್ಗೆ ಸುಳ್ಳು ಸುದ್ದಿ ಹಾಗೂ ಸಂದೇಶಗಳನ್ನು ಹಬ್ಬಿಸಿ, ಅನ್ಯಕೋಮಿನವರ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ನಾಶ ಮಾಡಿದ್ದರು. ಹೊನ್ನಾವರದಲ್ಲಿ ಪ್ರಕ್ಷುಬ್ದ ವಾತಾವರಣ ಸಹಜ ಸ್ಥಿತಿಗೆ ಮರಳುವ ಹೊತ್ತಲ್ಲೇ ಈ ಪ್ರಕರಣ ಸುದ್ದಿಯಾಗಿದ್ದು, ಇದರಿಂದ ಪ್ರಸ್ತುತ ಪ್ರದೇಶದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು.