ಎರಡನೆ ದಿನವಾದ ಶನಿವಾರ ದೊಡ್ಡ ಹಬ್ಬ ನಡೆಯಿತು. ಬೆಳಗ್ಗಿನಿಂದಲೇ ದೇವಾಲಯದಲ್ಲಿ ಇರುಳ್ ಬೆಳಕು, ಬೊಳ್ಕಾಟ್, ಚಂಡೆವಾದ್ಯ ವಿಧಿವತ್ತಾಗಿ ನಡೆದವು. ಬಳಿಕ ಮೂಗೂರು ಕೇರಿಯಿಂದ ದೇವರ ಕೊಡೆ, ಪಾಂಡಿಮಾಡು ಕೇರಿಯಿಂದ ದೇವರ ಚೌರಿ ಹಾಗೂ ಪೆಮ್ಮಾಡು ಕೇರಿಯಿಂದ ದೇವರ ಬೆತ್ತದ ಕುದುರೆಯನ್ನು ತಂದು ದೇವಾಲಯಕ್ಕೆ ಒಪ್ಪಿಸಿ ದೇವರ ದರ್ಶನ ಪಡೆಯಲಾಯಿತು.ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಮುಂಜಾನೆಯೇ ಹೆಮ್ಮಾಡು, ಪಾಂಡಿಮಾಡು, ಮುಗೂರು ಹಾಗೂ ತೋಣೂರು ಕೇರಿಯ ಮಂದಿ ಅಧಿಕ ಸಂಖ್ಯೆಯಲ್ಲಿ ಬಂದಿದ್ದರು.