ಸಮ್ಮೇಳನವನ್ನು ಉದ್ಘಾಟಿಸಿದ ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ. ಎಂ. ಎಸ್. ಮೂಡಿತ್ತಾಯ ಮಾತನಾಡಿ, ‘ವಿದ್ಯಾರ್ಥಿಗಳು ಕಲಿಕೆ ಮುಂದುವರೆಸುತ್ತಿರುವಂತೆಯೇ ವೃತ್ತಿಪರತೆಯನ್ನೂ ರೂಢಿಸಿಕೊಳ್ಳಬೇಕು. ಹತ್ತರೊಟ್ಟಿಗೆ ಹನ್ನೊಂದು ಎಂಬ ಭಾವನೆಯನ್ನು ರೂಢಿಸಿಕೊಳ್ಳದೇ ನಾಯಕತ್ವ ವಹಿಸಿಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡಬೇಕು. ಓದುವ ಸಂದರ್ಭದಲ್ಲಿ ಪಠ್ಯೇತರ ಚಟುವಟಿಕೆಗಳು ಮುಖ್ಯ. ಆದರೆ ಸಾಧನೆಯತ್ತ ಏಕಾಗ್ರ ಚಿತ್ತ ಇರುವುದೂ ಮುಖ್ಯ’ ಎಂದು ಹೇಳಿದರು.