ಈ ಶೈಕ್ಷಣಿಕ ಹಬ್ಬಕ್ಕೆ ನಗರಸಭೆ ಪ್ರಭಾರಿ ಅಧ್ಯಕ್ಷ ಜಯಣ್ಣ ಅವರು ಪೋಷಕರಾಗಿದ್ದು, ಸಂಸದ ಬಿ.ವಿ.ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ, ತಿಪ್ಪರಾಜು ಹವಾಲ್ದಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅವರು ಮಹಾಪೋಷಕರಾಗಿದ್ದಾರೆ. ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಕರೀಂ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ ಉಪಾಧ್ಯಕ್ಷರಾಗಿದ್ದಾರೆ. ಪತ್ರಕರ್ತ ಕೆ.ಸತ್ಯನಾರಾಯಣ ಕಾರ್ಯದರ್ಶಿಯಾಗಿದ್ದಾರೆ ಎಂದು ತಿಳಿಸಿದರು.