ಕೆ.ಆರ್.ಪೇಟೆ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಯಾವಾಗಲೂ ಕಸದ ರಾಶಿ ಕಂಡು ಬರುತ್ತಿದೆ. ಕಸದೊಂದಿಗೆ ನೀರು ನಿಂತು ಗಬ್ಬು ನಾರುತ್ತಿದೆ. ಪ್ರತಿ ದಿನ ನೂರಾರು ಬಸ್ಸುಗಳು, ಸಾವಿರಾರು ಪ್ರಯಾಣಿಕರು ಬಂದು ಹೋಗುವ ಇಲ್ಲಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಸರಿಯಾಗಿ ಆಗುತ್ತಿಲ್ಲ ಎಂದು ದೂರುತ್ತಾರೆ ಸಮಾಜಸೇವಕ ಎಚ್.ಬಿ.ಮಂಜುನಾಥ್.