‘ಈ ಚಿತ್ರದಲ್ಲಿ ನೀನಾಸಂ ಸತೀಶ್ ಹಾಗೂ ಶ್ರದ್ಧಾ ಅವರು ಕಾಲೇಜೊಂದರಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳಾಗಿರುತ್ತಾರೆ, ಇಬ್ಬರೂ ಪರಸ್ಪರ ಪ್ರೀತಿಸುತ್ತಿರುತ್ತಾರೆ. ಸಮಾಜದಲ್ಲಿ ನಡೆಯುವ ಕೆಲವು ಘಟನೆಗಳನ್ನು ಕಂಡು ಇವರು ಕ್ರಾಂತಿಕಾರಿಗಳಾಗಿ ಬದಲಾಗುತ್ತಾರೆ’ ಎಂದು ನಂದೀಶ್ ಅವರು ಈಗಾಗಲೇ ಕಥೆಯ ಎಳೆಯೊಂದನ್ನು ಬಿಟ್ಟುಕೊಟ್ಟಿದ್ದಾರೆ.