ಘಟಕದ ವ್ಯವಸ್ಥಾಪಕ ಪ್ರದೀಪ್ ಮಾತನಾಡಿ, ತಾಲ್ಲೂಕಿನ ಗುಡೇಕೋಟೆ ಮಾರ್ಗವಾಗಿ ಬೆಂಗಳೂರಿಗೆ ಬಸ್ ಬಿಡುವಂತೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು. ಅದು ಈಗ ಈಡೇರಿದೆ. ಹೊಸಪೇಟೆಯಿಂದ ಹೊರಡುವ ಬಸ್ ರಾತ್ರಿ 9.30ಕ್ಕೆ ಕೂಡ್ಲಿಗಿಗೆ, ಗುಡೇಕೋಟೆ, ಮೊಳಕಾಲ್ಮುರು, ಚಳ್ಳಕೆರೆ ಮಾರ್ಗವಾಗಿ ಮರುದಿನ ಬೆಳಿಗ್ಗೆ 5.30ಕ್ಕೆ ಬೆಂಗಳೂರು ಸೇರಲಿದೆ.