ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಹೆಣ್ಣು ಮಗಳ ಅತ್ಯಾಚಾರ, ಕೊಲೆ ಖಂಡನೀಯ: ಈಶ್ವರಪ್ಪ

Last Updated 22 ಡಿಸೆಂಬರ್ 2017, 8:49 IST
ಅಕ್ಷರ ಗಾತ್ರ

ಹೊನ್ನಾಳಿ: ವಿಜಯಪುರ ನಗರದ ದಲಿತ ಕುಟುಂಬದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಕೃತ್ಯ ಖಂಡನೀಯ ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ಈಶ್ವರಪ್ಪ ಹೇಳಿದರು.

ನಿರ್ಭಯಾ ಪ್ರಕರಣದಲ್ಲಿ ನೀಡಿದ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆಯನ್ನು ಈ ಆರೋಪಿಗಳಿಗೆ ನೀಡಬೇಕು. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಘಟನೆಗಳು ರಾಜ್ಯದಲ್ಲಿ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣ ನಡೆದಿರುವ ಬಗ್ಗೆ ರಾಜ್ಯದಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ವಿಜಯಪುರದ ಅಂಬೇಡ್ಕರ್ ಪ್ರತಿಮೆ ಬಳಿ ಕೆಲವು ಸಂಘಟನೆಗಳು ರಾತ್ರಿಯಿಡಿ ಪ್ರತಿಭಟನೆ ಮಾಡಿವೆ ಎಂದು ತಿಳಿಸಿದರು.

‘ಪ್ರಜಾಪರಿವರ್ತನಾ ವೇದಿಕೆ ಹಾಗೂ ಪ್ರಜಾಪರಿವರ್ತನಾ ಪಕ್ಷದಿಂದ ಪಟ್ಟಣದಲ್ಲಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದೇವೆ. ಈ ಪ್ರಕರಣದಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅರಕೆರೆ ಕೃಷ್ಣ, ತಾಲ್ಲೂಕು ಅಧ್ಯಕ್ಷ ಕೆ.ಒ. ಹನುಮಂತಪ್ಪ, ಪದಾಧಿಕಾರಿಗಳಾದ ಸಿದ್ದಪ್ಪ, ರುದ್ರೇಶ್, ಅಣ್ಣಪ್ಪ, ದಾನೇಶ್, ನಾಗರಾಜ್, ರಮೇಶ್, ಹನುಮಂತಪ್ಪ, ಶಶಿಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT