ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ನಿಲ್ದಾಣದ ಕಾಮಗಾರಿ ವಿಕ್ಷಣೆ

Last Updated 22 ಡಿಸೆಂಬರ್ 2017, 9:02 IST
ಅಕ್ಷರ ಗಾತ್ರ

ಮುಳಗುಂದ: ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿಯನ್ನು ಪಟ್ಟಣ ಪಂಚಾಯ್ತಿ ಹಿರಿಯ ಸದಸ್ಯ ಆರ್.ಎನ್.ದೇಶಪಾಂಡೆ ಹಾಗೂ ಸದಸ್ಯರು ವಿಕ್ಷಣೆ ಮಾಡಿದರು.

ಬಳಿಕ ಮಾತನಾಡಿದ ದೇಶಪಾಂಡೆ, ‘ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಡೆರಿದೆ. ₹ 1.84 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ಕಾಮಗಾರಿಯನ್ನು ಸಾರಿಗೆ ಸಂಸ್ಥೆ ಕೈಗೊಂಡಿದೆ. ಬಹುತೇಕ ಕಾಮಗಾರಿ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.

ಪಟ್ಟಣ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪುರ, ಉಪಾಧ್ಯಕ್ಷ ಕೆ.ಎಲ್.ಕರಿಗೌಡರ, ಸದಸ್ಯರಾದ ಎ.ಡಿ.ಮುಜಾವರ, ಎಂ.ಎಸ್.ಕಣವಿ, ಅಶೋಕ ಹುಣಸಿಮರದ, ಸಾಹಿತ್ಯ ಅಕಾಡೆಮಿ ಸದಸ್ಯ ಬಿ.ಎಂ.ಹರಪನಹಳ್ಳಿ, ಮುಖ್ಯಾಧಿಕಾರಿ ಎಸ್.ಡಿ.ಅಗಡಿ, ಮರಿಯಪ್ಪ ನಡುಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT