ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿವರ್ತನಾ ಯಾತ್ರೆಗೆ ಜನರನ್ನು ಸೇರಿಸಲು ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಒಂದು ತಿಂಗಳಿಂದ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಹೇಳಿಕೊಂಡು ತಿರುಗುತ್ತಿದ್ದರು. ಇದರ ಹಿಂದೆ ಯಾವುದೇ ಪ್ರಾಮಾಣಿಕ ಪ್ರಯತ್ನ ಇರಲಿಲ್ಲ. ಪರಿಕ್ಕರ್ ಪತ್ರ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣ ಹುಸಿ ಮಾಡಿದೆ. ಈ ಪತ್ರಕ್ಕೆ ಮೂರು ಕಾಸಿನ ಬೆಲೆಯೂ ಇಲ್ಲ. ಬಿಜೆಪಿಯವರ ರಾಜಕೀಯ ನಾಟಕದಿಂದ ಕರ್ನಾಟಕಕ್ಕೆ ಲಭಿಸಿದ್ದು ಶೂನ್ಯ’ ಎಂದು ದೂರಿದರು.