ಚೆನ್ನೈ (ಪಿಟಿಐ): ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ತನಿಖೆ ನಡೆಸುತ್ತಿರುವ ತನಿಖಾ ತಂಡ ಜಯಾ ಅವರ ನಿಕಟವರ್ತಿ ವಿ.ಕೆ. ಶಶಿಕಲಾ ಮತ್ತು ಅಪೋಲೊ ಆಸ್ಪತ್ರೆಯ ಮುಖ್ಯಸ್ಥರಿಗೆ ಸಮನ್ಸ್ ಜಾರಿ ಮಾಡಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಅವರಿಗೆ ಹದಿನೈದು ದಿನಗಳೊಳಗಾಗಿ ಉತ್ತರಿಸುವಂತೆ ನ್ಯಾಯಮೂರ್ತಿ ಎ. ಆರ್ಮುಗಂ ಅವರ ಏಕಸದಸ್ಯ ಪೀಠ ತಿಳಿಸಿದೆ. ಅಪೋಲೊ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರತಾಪ್ ರೆಡ್ಡಿ ಮತ್ತು ಡಾ. ಪ್ರೀತಾ ರೆಡ್ಡಿ ಅವರಿಗೆ ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ.