ಆ ನಂತರ ಮಾತನಾಡಿದ ಅವರು, ಉಡುಪಿಯಲ್ಲಿ ಕಾಡು, ಹಿನ್ನೀರು, ಸಮುದ್ರ ಹಾಗೂ ಪ್ರಸಿದ್ಧ ದೇವಾಲಯಗಳಿವೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಇದಕ್ಕಿಂತ ಉತ್ತಮ ಅವಕಾಶ ಬೇರೆಲ್ಲೂ ಸಿಗುವುದಿಲ್ಲ. ಆದ್ದರಿಂದ ಗರಿಷ್ಠ ಮಟ್ಟದಲ್ಲಿ ಇವುಗಳನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿಯೇ ಹೆಲಿ ಟೂರಿಸಂಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.