‘ವೀರಶೈವ–ಲಿಂಗಾಯತ ಎರಡೂ ಒಂದೇ ಎಂದು ಸ್ವತಂತ್ರ ಧರ್ಮಕ್ಕೆ ಶಿಫಾರಸು ಮಾಡಿದರೆ ಅಭ್ಯಂತರ ಇಲ್ಲ. ಆದರೆ, ಲಿಂಗಾಯತಕ್ಕೆ ಮಾತ್ರ ಪ್ರತ್ಯೇಕ ಧರ್ಮದ ಮಾನ್ಯಗೆ ಶಿಫಾರಸು ಮಾಡಿದರೆ ಅದಕ್ಕೆ ನಮ್ಮ ಪ್ರಬಲ ವಿರೋಧವಿದೆ. ಡಿ. 24ರಂದು ಗದುಗಿನಲ್ಲಿ ನಡೆಯಲಿರುವ ಸಮನ್ವಯ ಸಮಾವೇಶದಲ್ಲಿ ಎಲ್ಲ ಮಠಾಧೀಶರು ಸೇರಿ ಈ ಕುರಿತು ಸ್ಪಷ್ಟ ನಿರ್ಣಯ ತೆಗೆದುಕೊಳ್ಳುತ್ತೇವೆ’ ಎಂದರು. ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಇದ್ದರು.