‘ನಿರ್ಮಿತಿ ಕೇಂದ್ರದ ಹೆಸರಿನಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಕಾಮಗಾರಿ ನಡೆಸಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು’ ಎಂದು ಅತ್ತಿಕೊಡಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಶಾಂತ್ ಶೆಟ್ಟಿ, ಸ್ಥಳೀಯರಾದ ಸುಕುಮಾರ್ ಕರ್ಕೇರ, ಸದಾನಂದ ಸರ್ಕಾರವನ್ನು ಒತ್ತಾಯಿಸಿದ್ದಾರೆ.