ಕಿಮ್ಸ್ ಶೂಟೌಟ್ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಕೈವಾಡ ಇದೆ ಎಂದು ಕೆಲ ದಿನಗಳ ಹಿಂದೆ ಆರೋಪ ಮಾಡಿದ್ದರು. ಮಲ್ಲಮ್ಮ ಗೌಡರ, ತವನಪ್ಪ ಅಷ್ಟಗಿ, ಬಸವರಾಜ ಕೊರವರ ಹಾಗೂ ಅಮೃತ ದೇಸಾಯಿ ವಿರುದ್ಧ ಬೆಂಗಳೂರಿನ ಸಿಜೆಎಂ ನ್ಯಾಯಾಲಯದಲ್ಲಿ ವಿಜಯ ಕುಲಕರ್ಣಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.