ನಿರಾಶ್ರಿತ ರೈತರಾದ ನಾಗೇಗೌಡ, ರವಿ ಮೊಗಣ್ಣಗೌಡ, ಜಯರಾಮು, ಬೋರೇಗೌಡ ಎಂಬುವವರು ಕಳೆದ 30 ವರ್ಷಗಳಿಂದ ಕಚೇರಿಗಳಿಗೆ ಅಲೆದು ಅಲೆದೂ ನಮಗೂ ಸಾಕಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳದಿಂದ ನಮ್ಮನ್ನು ಕಾಪಾಡಿ ನಮ್ಮ ಭೂಮಿಯನ್ನು ನಮಗೆ ಕೊಡಿಸಿ, ಇಲ್ಲಾ ವಿಷ ಕೊಡಿ’ ಎಂದು ಕೈಮುಗಿದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಬಗ್ಗೆ ಪರಿಶೀಲಿಸುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.