ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಎಂದಿನಂತೆ ತೆರೆದಿದ್ದವು. ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಆದರೆ ವಿಜಯಪುರ ಬಂದ್ನಿಂದಾಗಿ ತಾಳಿಕೋಟೆ, ಮುದ್ದೇಬಿಹಾಳ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮದ ಜನರು ಕರ್ತವ್ಯ ಸೇರಿದಂತೆ ತುರ್ತು ಕಾರ್ಯಕ್ಕಾಗಿ ವಿಜಯಪುರಕ್ಕೆ ತೆರಳಬೇಕಾದ ಪ್ರಯಾಣಿಕರು ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಪರದಾಡಿದರು. ತಾಳಿಕೋಟೆ, ಮುದ್ದೇಬಿಹಾಳ, ದೇವರಹಿಪ್ಪರಗಿ, ನಿಡಗುಂದಿ ಸೇರಿದಂತೆ ತಾಲ್ಲೂಕಿನ ಗ್ರಾಮಗಳ ಮಾರ್ಗದಿಂದ ಪಟ್ಟಣಕ್ಕೆ ಬಸ್ ಸಂಚಾರ ಎಂದಿನಂತೆ ಇತ್ತು.