ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಕ್ಕರ್‌ಗೆ ತಿಳಿಹೇಳುವ ಧೈರ್ಯ ತೋರಲಿ: ಖರ್ಗೆ

Last Updated 24 ಡಿಸೆಂಬರ್ 2017, 6:25 IST
ಅಕ್ಷರ ಗಾತ್ರ

ಕಲಬುರ್ಗಿ: ‘ಮಹದಾಯಿ ನದಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ತಿಳಿಹೇಳುವ ಧೈರ್ಯ ತೋರಬೇಕು’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

‘ಇದು ಅಂತರರಾಜ್ಯಗಳ ನಡುವಿನ ಬಹುದೊಡ್ಡ ಸಮಸ್ಯೆ. ನಮ್ಮ ಪ್ರದೇಶದಲ್ಲಿ ಹರಿಯುವ ನೀರು ನಮಗೆ ಕೊಡಲೇಬೇಕು. ಕರ್ನಾಟಕಕ್ಕೆ 7.5 ಟಿಎಂಸಿ ಅಡಿ ನೀರನ್ನು ಬಳಸಲು ಗೋವಾ ಒಪ್ಪಿಗೆ ನೀಡಬೇಕು. ಪ್ರಧಾನಿ ಮೋದಿ ಮನಸ್ಸು ಮಾಡಿದರೆ ವಿವಾದ ಕ್ಷಣದಲ್ಲಿ ಬಗೆಹರಿಯುತ್ತದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಈ ವಿಷಯದಲ್ಲಿ ಪ್ರಧಾನಿ ಆಸಕ್ತಿ ತೋರುತ್ತಿಲ್ಲ. ಬಿಜೆಪಿ ನಾಯಕರಿಗೆ ವಿವಾದ ಅಂತ್ಯ ಕಾಣುವುದು ಬೇಕಾಗಿಲ್ಲ’ ಎಂದು ದೂರಿದರು.

‘ಮುಂಬರುವ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಕರ್ನಾಟಕದ ಚುನಾವಣೆಗಳನ್ನು ಪಕ್ಷ ಇನ್ನಷ್ಟು ಗಂಭೀರವಾಗಿ ಪರಿಗಣಿಸಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಈಗಾಗಲೇ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT