ಗದ್ದೆಗಳಿಗೆ ಶ್ರೀಮಂಗಲ ಹೋಬಳಿಯ ಕಂದಾಯ ಪರಿವೀಕ್ಷಕ ಪಿ.ಎಸ್. ದೇವಯ್ಯ, ಕೃಷಿ ಅಧಿಕಾರಿ ಶಿವಯ್ಯಗೌಡ ಈಚೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಸಂಕೇತ್ ಪೂವಯ್ಯ, ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಶ್ರೀಮಂಗಲದ ಚಿಮ್ಮಂಗಡ ಗಣೇಶ್, ಅಜ್ಜಮಾಡ ಚಂಗಪ್ಪ, ಬಾಚಮಾಡ ಭವಿ ಕುಮಾರ್, ಅಜ್ಜಮಾಡ ಕುಶಾಲಪ್ಪ, ಚಂಗುಲಂಡ ರಾಜಪ್ಪ, ಬೋಡಂಗಡ ಕಾರ್ಯಪ್ಪ ಅವರು ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.